ಕುಂಬಳೆಯಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಕ್ರೀಡಾಕೂಟ, ರಾಜ್ಯ ಸಮ್ಮೇಳನದ ಆಮಂತ್ರಣ ಬಿಡುಗಡೆ

by Narayan Chambaltimar

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘಟನೆಯ ಅಧ್ಯಾಪಕರ ಕ್ರೀಡಾಕೂಟವು ಕುಂಬಳೆ ಜಿ.ಎಸ್.ಬಿ.ಎಸ್ ಶಾಲಾ ಮೈದಾನದಲ್ಲಿ ಜರಗಿತು. ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಪಿ.ಬಿ ಅಧ್ಯಕ್ಷತೆ ವಹಿಸಿದ್ದರು

. ಕ್ರೀಡಾಕೂಟದ ಉದ್ಘಾಟನೆಯನ್ನು ಕುಂಬಳೆ ಶಾಲಾ ಮುಖ್ಯೋಪಧ್ಯಾಯರಾದ ವಿಜಯ‌ಕುಮಾರ್ ಪಿ ನೆರವೇರಿಸಿದರು.ಕನ್ನಡ ಅಧ್ಯಾಪಕರ ಒಗ್ಗಟ್ಟಿಗೆ ಈ ಕ್ರೀಡಾಕೂಟವು ಸಹಕಾರಿಯಾಗಲಿಯೆಂದು ಉದ್ಘಾಟಿಸಿ ಮಾತನಾಡಿದರು.

 

ನಿವೃತ್ತ ದೈಹಿಕ ಶಿಕ್ಷಕರಾದ ಶಶಿಕಾಂತ್ ಬಲ್ಲಾಳ್ ಹಾಗೂ ವೆಂಕಟರಮಣ ಭಟ್ ರಾಜ್ಯ ಸಮ್ಮೇಳನದ ಆಮಂತ್ರಣವನ್ನು ಬಿಡುಗಡೆಗೊಳಿಸಿದರು. ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಉಮೇಶ, ಪ್ರಭಾವತಿ ಕೆದಿಲಾಯ, ಅಧಿಕೃತ ವಕ್ತಾರರಾದ ಸುಕೇಶ, ಕೋಶಾಧಿಕಾರಿ ಶರತ್ ಕುಮಾರ್ , ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷರಾದ ಜಯರಾಮ, ಕಾರ್ಯದರ್ಶಿ ಜೀವನ್ ಕುಮಾರ್ ಉಪಸ್ಥಿತರಿದ್ದರು. ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ ಕಾರ್ಯದರ್ಶಿ ಪ್ರದೀಪ್ ಕೆ.ವಿ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಜಬ್ಬಾರ್ ನಿರೂಪಿಸಿದರು.

 

You may also like

Are you sure want to unlock this post?
Unlock left : 0
Are you sure want to cancel subscription?
-
00:00
00:00
Update Required Flash plugin
-
00:00
00:00